News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2162

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…