News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2164

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…