ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.
ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.
ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.
ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !
ಕೃಪೆ:ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…