ಉಪಯುಕ್ತ ಮಾಹಿತಿ

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

2138

ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .ನಿಮ್ಮ ಹೆಂಡತಿಯಿಂದ “ಅದೇನು ಸೀಮೇಗಿಲ್ಲದ ಗಂಡೂಂತ ಇವನಿಗೆ ಕೊಟ್ಟು ಮದುವೆ ಮಾಡಿದ್ರಪ್ಪಾ ನನ್ನ ಥತ್ “ ಅಂತ ಬೈಯ್ಯಿಸಿಕೊಳ್ಳಬಾರದೆಂದರೆ ನಾ ಹೇಳಿದಂತೆ ಮಾಡಿ.

ಮೊದಲಿಗೆ ನಿಮ್ಮ ಮನೆಯಲ್ಲಿರುವ ಎರಡು ಬೇರೆ ಬೇರೆ ಬಣ್ಣದ ಗುಲಾಬಿ ಹೂ ಬಿಡುವ ಗಿಡಗಳನ್ನು ಆರಿಸಿಕೊಳ್ಳಿ.ಆ ಗಿಡದ ಮೇಲ್ಭಾಗದಲ್ಲಿ ಚಿಗುರುತ್ತಿರುವ ಕಡೆಯಿಂದ ಕೆಳಗೆ ನೋಡುತ್ತಾ ಬಂದರೆ ಅದೇ ಕೊಂಬೆಯಲ್ಲಿ ಮತ್ತೊಂದು ಕಡೆ ಇನ್ನೂ ಚಿಗುರಲು ತಯಾರಾಗುತ್ತಿರುವ ಕೆಂಪು ಬಣ್ಣದ ಗೆಣ್ಣು ಕಾಣುತ್ತದೆಯಲ್ಲಾ ಅದನ್ನು ಗಮನಿಸಿ.

ಈಗ ಮತ್ತೊಂದು ಗಿಡದ ಬಳಿ ಹೋಗಿ ಹಿಂದೆ ನೋಡಿದ ಅದೇ ಬೆಳ್ಳುಳ್ಳಿ ಗಾತ್ರದ ಕೊಂಬೆಗೆ ಒಂದು ಸ್ವಚ್ಚವಾದ ಬ್ಲೇಡ್ ತೆಗೆದುಕೊಂಡು ಕೊಂಬೆ ಉದ್ದವಾಗಿರುವ ಮಾದರಿಯಲ್ಲಿಯೇ ಒಂದು ಸೆಂಟಿಮೀಟರಿನಷ್ಟು ಉದ್ದದ ಗೆರೆ ಎಳೆಯಿರಿ ಅಂದರೆ ನಿಮ್ಮ ಬ್ಲೇಡಿನಿಂದ ಕುಯ್ಯುವುದು ಕೊಂಬೆಯ ಕಾಂಡದ ಒಳಗೆ ಹೋಗುವುದು ಬೇಡ ಮೇಲಿನ ಕಾಂಡದ ಸಿಪ್ಪೆಯನ್ನು ಮೀರುವುದು ಬೇಡ.

ಹೀಗೆ ಉದ್ದಕ್ಕೆ ಕುಯ್ದ ನಂತರ ಆ ಗೆರೆಯ ಮೇಲ್ಭಾಗಕ್ಕೆ ಅಡ್ಡ ಸ್ವಲ್ಪ ಕುಯ್ದುಬಿಡಿ ಅಂದರೆ ಈಗ ನಿಮಗೆ ಅದು ಇಂಗ್ಲೀಷಿನ T ಆಕಾರದಲ್ಲಿ ಕಾಣುತ್ತಿದೆಯಲ್ಲವೇ ? ಅದನ್ನು ನಿಧಾನವಾಗಿ ಸಿಪ್ಪೆ ಬಿಡಿಸಿ .ಈಗ ಅದನ್ನು ಹಾಗೆಯೇ ಬಿಟ್ಟು ಮೊದಲಿನ ಗಿಡದ ಹೊಸದಾದ ಚಿಗುರು ಗಿಣ್ಣಿನ್ನು ನಿಧಾನವಾಗಿ ಮೇಲಿನಿಂದ ಸಿಪ್ಪೆಯ ಅಳತೆಗೆ ಮಾತ್ರ ನಿಧಾನವಾಗಿ ಸೌತೆಕಾಯಿ ಹೆರೆಯುವ ಮಾದರಿಯಲ್ಲಿ ಚಿಗುರು ಗಿಣ್ಣನ್ನು ಮಾತ್ರ ಹೊರ ತೆಗೆಯಿರಿ.

ಹೊರತೆಗೆದ ಚಿಗುರು ಗಿಣ್ಣನ್ನು ತಂದು T ಡಿಸೈನಲ್ಲಿ ಕಟ್ ಮಾಡಿಟ್ಟ ಕಾಂಡದ ಸಿಪ್ಪೆಯೊಳಗೆ ನಿಧಾನವಾಗಿ ಮೇಲಿನಿಂದ ತೂರಿಸಿ ನಂತರ ಆ ಗಿಣ್ಣಿನ ಮೇಲೆ ಕೆಳಗೆ ಗಮ್ ಟೇಪ್ ಸುತ್ತಿ ಬಿಡಿ .ಇದಾದ ನಂತರ ಗಿಡದಲ್ಲಿ ಶೇ 80ರಷ್ಟು ಎಲೆಗಳನ್ನು ಅದೇ ಬ್ಲೇಡಿನಿಂದ ಕತ್ತರಿಸಿ ಹಾಕಿ ಹಾಗೂ ಗಿಡದ ಮೇಲಭಾಗದಲ್ಲಿರುವ ಚಿಗುರನ್ನೂ ಕೂಡ ಕತ್ತರಿಸಿ ಬಿಡಿ.ಇದನ್ನು ಟಿ ಬಡ್ಡಿಂಗ್ ಎಂದು ಕರೆಯುತ್ತಾರೆ.

ನಂತರ ನೀವು ಮೂರ್ನಾಲ್ಕು ದಿನಗಳಲ್ಲಿ ಈ ಹೊಸ ಗಿಣ್ಣು ನಿಧಾನವಾಗಿ ಚಿಗುರಿ ಹೊಸ ಬಣ್ಣದ ಹೂ ಬಿಡಲು ಶುರುವಾಗುತ್ತದೆ.ಈ ವಿಧಾನ ಮೊದಲು ಬಂದದ್ದು ನಿಂಬೆ ಗಿಡದಲ್ಲಿ ಬೇಗನೆ ಕಾಯಿ ಬಿಡಿಸುವುದಕ್ಕೆ ಆ ನಂತರ ಬಹಳಷ್ಟು ಗಿಡಗಳಿಗೆ ಇದೇ ವಿಧಾನವನ್ನು ಇಸ್ರೇಲಿನಲ್ಲಿ ಬಳಸುತ್ತಿದ್ದಾರೆ.

ಈ ತರಹದ ಕಸಿ ಮಾಡುವಾಗ ಒಂದೇ ಕೊಂಬೆಯ ಗಿಡಕ್ಕೆ ಕಸಿ ಮಾಡಿದರೆ ಗರಿಷ್ಠ ಫಲಿತಾಂಶ ಎರಡೂ ಗಿಡದಿಂದ ಪಡೆಯಬಹುದು ಹಾಗೂ ಒಂಟಿ ಕೊಂಬೆಯ ಗಿಡಕ್ಕೆ ಈ ತರಹ ಕಸಿ ಮಾಡಿದ ನಂತರ ಕಸಿ ಮಾಡಿದ ಜಾಗದಿಂದ ಮೂರು ಇಂಚಿನಷ್ಟು ಮೇಲಿನ ಕೊಂಬೆಯನ್ನು ಅರ್ಧಕ್ಕೆ ಕತ್ತರಿಸಿ ಮಡಿಚಿಬಿಡಬೇಕು ಏಕೆಂದರೆ ಮೇಲಿನ ಕೊಂಬೆ ಹಾಗೆಯೇ ಇದ್ದರೆ ಗಿಡ ಪೋಷಕಾಂಶಗಳೆಲ್ಲವೂ ಮೇಲಕ್ಕೆ ಹೋಗಲು ಶುರುವಾಗುವುದರಿಂದ ಕಸಿ ಮಾಡಿದ ಹೊಸ ಚಿಗುರು ಬೇಗ ಬೆಳೆಯುವುದಿಲ್ಲ.

ಹಾಗೂ ಅದನ್ನು ಏಕೆ ಅರ್ಧ ಕತ್ತರಿಸಿ ಹಾಗೆಯೇ ಬಿಡಬೇಕೆಂದರೆ ಈ ಮೊದಲಿನ ಕೊಂಬೆಯು ನೆಲದಿಂದ ಪೋಷಕಾಂಶಗಳನ್ನು ಅತ್ಯುತ್ತಮವಾಗಿ ಮೇಲಕ್ಕೆ ಎಳೆಯುತ್ತಿರುತ್ತದೆ ಹಾಗಾಗಿ ಅದನ್ನು ಪೂರಾ ಕತ್ತರಿಸಿಬಿಟ್ಟರೆ ಪೂಷಕಾಂಶ ಮೇಲೆಕ್ಕೆಳೆಯುವ ಪ್ರಮುಖ ಪಂಪನ್ನೇ ಆಫ್ ಮಾಡಿದಂತಾಗುತ್ತದೆ ಹಾಗಾಗಿ ಅದನ್ನು ಅರ್ಧ ಕತ್ತರಿಸಿ ಮಡಚಿ ಬಿಟ್ಟರೆ ಅದು ಮುಂದೆ ಬಳೆಯುವುದಿಲ್ಲ ಆದರೆ ಪೋಷಕಾಂಶ ಸೆಳೆದು ಹೊಸ ಚಿಗುರಿಗೆ ಕೊಡುತ್ತದೆ ಎಂದಷ್ಟೇ.

ಈ ವಿಧಾನದಲ್ಲಿ ನಿಮ್ಮ ಎರಡೂ ಗಿಡಗಳೂ ಕೂಡ ಹಾಳಾಗುವುದಿಲ್ಲ ಹಾಗೂ ಏಕಕಾಲದಲ್ಲಿ ಎರಡೂ ಗಿಡಗಳಿಗೆ ಕಸಿ ಮಾಡಬಹುದು.ಹಾಗೂ ನಿಮ್ಮ ಹೆಂಡತಿಯು ಗುಲಾಬಿ ಗಿಡಕ್ಕೆ ಕಸಿ ಮಾಡಲು ಒಪ್ಪಿಗೆ ಕೊಡದಿದ್ದರೆ ಪಕ್ಕದ ಮನೆಯ ಆಂಟಿಯ ಗುಲಾಬಿ ಗಿಡಕ್ಕೆ ಆದರೂ ಕಸಿ ಮಾಡಿಬಿಡಿ !
ನಾಳೆದಿನ ಬಿಡುವ ಚಿತ್ರಾವಿಚಿತ್ರ ಬಣ್ಣದ ಗುಲಾಬಿ ಹೂ ನೋಡಿ ಹೊಟ್ಟೆ ಉರಿದುಕೊಳ್ಳಲಿ !

ಕೃಪೆ:ಉಮೇಶ್ ಆಚಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…