ರೆಸಿಪಿ

ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

1002

ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

ಇದಕ್ಕೆಲ್ಲಾ ಒಂದೇ ಪರಿಹಾರ. ನಿಮ್ಮ ಮನೆಯಲ್ಲೇ ಪಾನಿ ಪುರಿ ತಯಾರಿಸಿ. ಹಾಗಾದ್ರೆ “ಪಾನಿಪುರಿ” ತಯಾರಿಸಲು ಹೇಗೆಂದು ತಿಳಿಯಲು ಮುಂದೆ  ಓದಿ…

ತಯಾರಿಸಲು ಬೇಕಾಗುವ ಸಾಮಗ್ರಿಗಳು:- 

ಪಾನಿತಯಾರಿಸಲು ಕೊತ್ತಂಬರಿ ಸೊಪ್ಪು – 1 ಕಟ್ಟು

ಪುದೀನಾ ಸೊಪ್ಪು – 1 ಕಟ್ಟು

ಹಸಿಮೆಣಸಿನಕಾಯಿ – 2 ರಿಂದ 3

ಹುಣಸೆಹಣ್ಣು – ದೊಡ್ಡ ನಿಂಬೆಗಾತ್ರದಷ್ಟು

ನಿಂಬೆಹಣ್ಣು – 1

ಕಾಳುಮೆಣಸು – 2 ಟೀ ಚಮಚ

ಜೀರಿಗೆ – 2 ಟೀ ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಕುದಿಸಿ ಆರಿಸಿದ ನೀರು – ಸುಮಾರು ಒಂದೂವರೆ ಲೀಟರ್

ಆಲೂ ಪಲ್ಯ ತಯಾರಿಸಲು: 

ಒಂದು ದೊಡ್ಡ ಆಲೂಗಡ್ಡೆ

ಕೆಂಪು ಮೆಣಸಿನ ಪುಡಿ – 1 / 2 ಚಮಚ

ಕಾಳುಮೆಣಸಿನ ಪುಡಿ – 1 / 4 ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಮಾವಿನ ಹಣ್ಣಿನ ಪುಡಿ  – 1 / 4 ಚಮಚ /ನಾಲ್ಕಾರು ಹನಿ ನಿಂಬೆರಸ

ಈರುಳ್ಳಿ – 1

ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ

ತಯಾರಿಸುವ ವಿಧಾನ : 

  • ಕರಿಮೆಣಸು, ಜೀರಿಗೆಯನ್ನು ಹುರಿದು ಪುಡಿಮಾಡಿಕೊಳ್ಳಿ. ಹರಳು ಉಪ್ಪನ್ನು ಸೇರಿಸುವುದಾದರೆ ಅದನ್ನೂ ಸ್ವಲ್ಪ ಹುರಿದುಕೊಳ್ಳಬೇಕು.
  • ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಹುಣಸೆಹಣ್ಣು, ಹಸಿಮೆಣಸು ಇಷ್ಟನ್ನೂ ಸ್ವಲ್ಪ ನೀರು ಸೇರಿಸಿ ರುಬ್ಬಿ, ಚೆನ್ನಾಗಿ ಸೋಸಿ ಇಟ್ಟುಕೊಳ್ಳಬೇಕು.
  • ಸೋಸಿಕೊಂಡ ರಸಕ್ಕೆ ಬೇಕಾದಷ್ಟು ನೀರನ್ನು ಸೇರಿಸಿ, ಪುಡಿಮಾಡಿದ ಜೀರಿಗೆ, ಕರಿಮೆಣಸನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪು ಮತ್ತು ನಿಂಬೆರಸವನ್ನು ಸೇರಿಸಿ ಕಲಸಬೇಕು. ಇದರ ರುಚಿ ಉಪ್ಪು, ಹುಳಿ, ಖಾರ ಹದವಾಗಿರಲಿ.

ಆಲೂ ಪಲ್ಯ :

  • ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು.
  • ಆಲೂಗಡ್ಡೆಯನ್ನು ಬೇಯಿಸಿ, ಕೈಗಳಿಂದ ಹಿಸುಕಿ ಮೆತ್ತಗೆ ಹಿಟ್ಟಿನಂತೆ ಮಾಡಿಕೊಳ್ಳಬೇಕು.
  • ಇದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಪುಡಿ, ಪುಡಿಮಾಡಿದ ಕಾಳುಮೆಣಸು, ಉಪ್ಪು, ಹುಳಿ ಎಲ್ಲವನ್ನೂ ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು.
  • ಈಗ ಗೋಲ್ ಗಪ್ಪಾ ಅಥವಾ ಪೂರಿಯನ್ನು ತೆಗೆದುಕೊಂಡು ಕೈಯಿಂದ ಒತ್ತಿ ಒಂದು ಮೇಲ್ಮೈಯಲ್ಲಿ ತೂತು ಮಾಡಿಕೊಂಡು ಪೂರಿಯ ಅರ್ಧಭಾಗದವರೆಗೆ ಪಲ್ಯವನ್ನು ತುಂಬಿ, ನಂತರ ಉಳಿದರ್ಧಕ್ಕೆ ಪಾನಿಯನ್ನು ತುಂಬಿಸಿದರೆ ರುಚಿಕರವಾದ ಪಾನಿಪುರಿ ರೆಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…