News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

728

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್‌ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.

ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್‌ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್‌ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್‌, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್‌ ಬೇರಾರೂ ಅಲ್ಲ, ನಟ ಜಗ್ಗೇಶ್‌! ಜೂನ್‌ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.

ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.

ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್‌ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್‌ ಕೆ.ಆರ್‌. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…