ಸಿನಿಮಾ

ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

728

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿಸಿದ್ದ 10 ಜನ ಫೈನಲಿಸ್ಟ್‌ ಗಳು ಮತ್ತೂಮ್ಮೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.

ಅಂದ ಆಗೇ ಆ ಕಾರ್ಯಕ್ರಮದ ಹೆಸರು “ಕಿಲಾಡಿ ಕುಟುಂಬ” ವಿಶೇಷವಾಗಿ ನವರಸನಾಯಕ ಜಗ್ಗೇಶ್‌ ಅವರು ಈ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿದ್ದ ಜಗ್ಗೇಶ್‌ ಅವರು ಇಲ್ಲಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಅಲ್ಲದೆ, ಇವರೊಂದಿಗೆ ವಿಶೇಷವಾಗಿ ಡ್ರಾಮಾ ಜ್ಯೂನಿಯರ್, ಲಿಟ್ಲ ಚಾಂಪಿಯನ್ಸ್‌, ಸರಿಗಮಪ ಹಾಗೂ ಜೀ ಕುಟುಂಬದ ಬಹುತೇಕ ಸದಸ್ಯರು ಈ ಕಿಲಾಡಿ ಕುಟುಂಬದಲ್ಲಿ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಇವರಿಗೆಲ್ಲ ಕ್ಯಾಪ್ಟನ್‌ ಬೇರಾರೂ ಅಲ್ಲ, ನಟ ಜಗ್ಗೇಶ್‌! ಜೂನ್‌ 12ರ ಸೋಮವಾರದಿಂದ ಆರಂಭವಾಗಲಿರುವ ಈ ರಿಯಾಲಿಟಿ ಶೋ ಈವರೆಗೆ ಪ್ರಸಾರಗೊಂಡ ಕಾಮಿಡಿ ಕಾರ್ಯಕ್ರಮಗಳೆಲ್ಲವುಗಳಿಗಿಂತ ವಿಭಿನ್ನವಾಗಿ ಮೂಡಿಬರಲಿದೆ.

ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಂತೆ ಇದು ಕೂಡ ಪ್ರೇಕ್ಷಕರನ್ನು ರಂಜಿಸಲೆಂದೇ ನಿರೂಪಿಸುತ್ತಿರುವ ಶೋ ಆಗಿದೆ. ಆದರೆ, ಈ ಬಾರಿ ವಿಶೇಷವಾಗಿ ಕಾಮಿಡಿಯ ಜೊತೆಗೆ ಎಲ್ಲಾ ಬಗೆಯ ನವರಸಗಳನ್ನು ಪ್ರೇಕ್ಷಕರಿಗೆ ನೀಡುವ ಪ್ರಯತ್ನ ಶೋನಿಂದ ನಡೆಯುತ್ತಿದೆ.

ಎಂದಿನಂತೆ ನಾಡಿನ ಮೂಲೆ ಮೂಲೆಯಲ್ಲಿರುವ ಪ್ರತಿಭೆಗಳನ್ನು ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಎಲ್ಲಾ ತಯಾರಿಯೂ ನಡೆದಿದೆ. ಇದರ ಜೊತೆಗೆ, ದಿನದಿಂದ ದಿನಕ್ಕೆ ಮರೆಯಾಗುತ್ತಿರುವ ಜಾನಪದ ಕಲೆ ಹಾಗೂ ಜಾನಪದ ಕಲಾವಿದರನ್ನು ಹುಡುಕಿ ಈ ಕಾರ್ಯಕ್ರಮದ ಮೂಲಕ ಬೆಳಕಿಗೆ ತರುವಂತಹ ಹೊಸ ಪ್ರಯತ್ನವನ್ನು ಜೀ ವಾಹಿನಿ ತಂಡ ಕೈಗೆತ್ತಿಕೊಂಡಿದೆ.

ವಿಶೇಷವೆಂದರೆ ನವರಸ ನಾಯಕ ಜಗ್ಗೇಶ್‌ ಅವರೊಂದಿಗೆ, ಕಾಮಿಡಿ ಕಿಲಾಡಿಗಳ ವಿಜೇತರಾದ ಶಿವರಾಜ್‌ ಕೆ.ಆರ್‌. ಪೇಟೆ ಹಾಗೂ ನಯನ ಕೂಡ ನಿರೂಪಣೆಯ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ. ಜೂ.12ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಸಂಜೆ 7 ರಿಂದ 7.30ರ ವರೆಗೆ ಕಿಲಾಡಿ ಕುಟುಂಬ ಪ್ರಸಾರವಾಗಲಿದೆ. ಈ ಕಿಲಾಡಿ ಕುಟುಂಬ ವಾರದ 5 ದಿನವೂ ಪ್ರಸಾರವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಸುದ್ದಿ

    ಈ ಬ್ಯುಸಿನೆಸ್ಸನ್ನು ಶುರು ಮಾಡಿದರೆ ತಿಂಗಳಿಗೆ ಕಚಿತವಾಗಿ ನೀವು 1 ಲಕ್ಷ ರೂ. ಗಳಿಸಬಹುದು…!

    ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಉಪಯುಕ್ತ ಮಾಹಿತಿ

    ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ..!ಹೇಗೆ ಎಂದು ತಿಳಿಯಲು ಇದನ್ನು ಓದಿ ..

    ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.