News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆಧ್ಯಾತ್ಮ

ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

1867

ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.

ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ  ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.

ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ  ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ  ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.

 

ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-

  1. ಏನಾದರೂ ಮಾಡುತಿರು ತಮ್ಮ…

ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ  ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ  ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.

  1. ಪ್ರೀತಿ ಇರಲಿ ಸಕಲವಸ್ತುಗಳಲಿ…

ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ  ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.

  1. ನಂಬಿ ಕೆಟ್ಟವರಿಲ್ಲವೋ…

ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ  ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.

ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…