ಆಧ್ಯಾತ್ಮ

ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

1852

ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.

ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ  ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.

ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ  ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ  ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.

 

ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-

  1. ಏನಾದರೂ ಮಾಡುತಿರು ತಮ್ಮ…

ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ  ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ  ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.

  1. ಪ್ರೀತಿ ಇರಲಿ ಸಕಲವಸ್ತುಗಳಲಿ…

ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ  ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.

  1. ನಂಬಿ ಕೆಟ್ಟವರಿಲ್ಲವೋ…

ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ  ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.

ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.