ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…