ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…