News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

1876

ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.

ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ  ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.

ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ  ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ  ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.

 

ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-

  1. ಏನಾದರೂ ಮಾಡುತಿರು ತಮ್ಮ…

ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ  ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ  ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.

  1. ಪ್ರೀತಿ ಇರಲಿ ಸಕಲವಸ್ತುಗಳಲಿ…

ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ  ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.

  1. ನಂಬಿ ಕೆಟ್ಟವರಿಲ್ಲವೋ…

ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ  ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.

ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

    ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…