ಆಧ್ಯಾತ್ಮ

ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

1855

ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.

ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ  ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.

ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ  ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ  ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.

 

ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-

  1. ಏನಾದರೂ ಮಾಡುತಿರು ತಮ್ಮ…

ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ  ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ  ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.

  1. ಪ್ರೀತಿ ಇರಲಿ ಸಕಲವಸ್ತುಗಳಲಿ…

ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ  ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.

  1. ನಂಬಿ ಕೆಟ್ಟವರಿಲ್ಲವೋ…

ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ  ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.

ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….