News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11307

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ದೇಶ-ವಿದೇಶ

    ಮೋದಿ ಸರ್ಕಾರದ ಈ ಯೋಜನೆ ಜಾರಿಗೆ ಬಂದ್ರೆ ನಿಲ್ಲಲಿದೆ ಕರೆಂಟ್ ಕಳ್ಳತನ!ಬರಲಿದೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍…

    ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..