ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.
ಉಪ್ಪುನೀರಿನ ಮುಕ್ಕಳಿಕೆ:-
ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.
ಪುದಿನಾ ಎಣ್ಣೆ:-
ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.
ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.
ಲ್ಯಾವೆಂಡರ್ ಎಣ್ಣೆ:-
ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ
ಗೊಂಡೆಹೂವಿನ ದಳಗಳು:-
ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.
ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-
ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.
ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-
ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…