ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…