ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…