ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

55

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…