ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?
ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.
ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.
ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.