ಆರೋಗ್ಯ

ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

888

ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ.

ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲ ಎಂದು ಕರೆಯಲ್ಪಡುವ ರಾಮ ಬಾಣವನ್ನು ಪ್ರಯೋಗಿಸಿ.

ನೆಲ್ಲಿಕಾಯಿ ಪೇಸ್ಟ್ :-

ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, 30 ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ. ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.

 

ನೆಲ್ಲಿಕಾಯಿ-ಲಿಂಬೆಹಣ್ಣಿನ ಪ್ಯಾಕ್:-

ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಕೊಂಡು ಅದನ್ನು ಚೆನ್ನಾಗಿ ಒಣಗಿಸಿ. ನಂತರ ಅದನ್ನು ಚೆನ್ನಾಗಿ ಪುಡಿ ಮಾಡಿಕೊಂಡು, ಕಂಟೇನರ್‌ನಲ್ಲಿ ಹಾಕಿಟ್ಟುಕೊಳ್ಳಿ.

ನಿಮಗೆ ಅಗತ್ಯವಾದಾಗ ಇದನ್ನು ನೀರು ಮತ್ತು ಲಿಂಬೆರಸದಲ್ಲಿ ಬೆರೆಸಿಕೊಂಡು ತೆಳುವಾದ ಪೇಸ್ಟ್ ಮಾಡಿಕೊಂಡು, ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಇದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತೊಳೆಯಿರಿ. ಹೆಚ್ಚಿನ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಲು, ಕೂದಲನ್ನು ತೊಳೆಯುವಾಗ ಸೀಗೆಕಾಯಿಯನ್ನು ಬಳಸಬಹುದು.

ನೆಲ್ಲಿಕಾಯಿ-ತುಳಸಿ ಪ್ಯಾಕ್:-

ನೆಲ್ಲಿಕಾಯಿಯನ್ನು ತುಳಸಿ ಮತ್ತು ನೀರಿನೊಂದಿಗೆ ಬೆರೆಸಿಕೊಂಡು ಮೃದುವಾದ ಪೇಸ್ಟ್ ಮಾಡಿ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ನೆಲ್ಲಿಕಾಯಿ ಇಲ್ಲವಾದಲ್ಲಿ, ನೆಲ್ಲಿ ಕಾಯಿ ಪುಡಿಯನ್ನು ಸಹ ಬಳಸಬಹುದು. ಈ ಪ್ಯಾಕನ್ನು ನಿಮ್ಮ ಕೂದಲಿನ ಬುಡಕ್ಕೆ ಲೇಪಿಸಿ 30 ನಿಮಿಷಗಳ ಕಾಲ ಬಿಡಿ, ನಂತರ ಇದನ್ನು ತೊಳೆಯಿರಿ.

 

ಈ ಬಗೆಯಲ್ಲಿ ನೆಲ್ಲಿಕಾಯಿ ರಸವನ್ನು ಲೇಪಿಸಿಕೊಳ್ಳುವುದರಿಂದ, ತಲೆಹೊಟ್ಟನ್ನು ನಿವಾರಿಸಿಕೊಳ್ಳಬಹುದು. ಈ ವಿಧಾನವನ್ನು ವಾರಕ್ಕೆ ಎರಡು ಬಾರಿ ಮಾಡಿ, ತ್ವರಿತಗತಿಯಲ್ಲಿ ಫಲಿತಾಂಶವನ್ನು ಪಡೆಯಬಹುದು. ಇದು ನಿಮಗೆ ತಲೆಹೊಟ್ಟನ್ನು ಮಾತ್ರ ನಿವಾರಿಸುವುದಿಲ್ಲ, ಜೊತೆಗೆ ನಿಮ್ಮ ಕೂದಲಿಗೆ ಕಂಡೀಶನರನ್ನು ಸಹ ನೀಡಿ, ಸ್ವಾಭಾವಿಕವಾಗಿ ಕೂದಲು ಹೊಳೆಯುವಂತೆ ಮಾಡುತ್ತದೆ.

1.ಬೆಟ್ಟದ ನಲ್ಲಿಕಾಯಿ ಜ್ಯೂಸ್ ತಯಾರಿಸಿ ಸ್ನಾನದ ನೀರಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಬೆವರು ವಾಸನೆಗೆ ಕಡಿವಾಣ.

2.ಎರಡು ಚಮಚ ಅಂಟುವಾಳದ ಪುಡಿಗೆ ಎರಡು ಚಮಚ ಬೆಟ್ಟದ ನೆಲ್ಲಿಕಾಯಿ ಪುಡಿ ಹಾಕಿ ತಲೆಕೂದಲಿಗೆ ಹಚ್ಚಿ ತೊಳೆದು ನೋಡಿ ಕೂದಲು ಕಾಂತಿಯುತವಾಗುವುದು.

3.ಹೇನಿನ ಕಾಟ ಹೆಚ್ಚಾಗಿದ್ದರೆ ಬೆಟ್ಟದ ನೆಲ್ಲಿಕಾಯಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದಕ್ಕೆ ನಿಂಬೆರಸ ಸೇರಿಸಿ ಕೂದಲ ಬುಡಕ್ಕೆ ಹಚ್ಚಿ ಒಂದೆರೆಡು ತಾಸು ಬಿಟ್ಟು ತೊಳೆಯಿರಿ.

4.ಕಪ್ಪು ಕೂದಲಿಗಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಒಣಗಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕುದಿಸಿ ಇಟ್ಟುಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಆರೋಗ್ಯ

    ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

    ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading