ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.
ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.
ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.
ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.
ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…