ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5535

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…