ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…