ವಿಸ್ಮಯ ಜಗತ್ತು

ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

5530

ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.

ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.

ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.

ಇಲ್ಲಿ ಓದಿ:-ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ???

ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.

ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.

ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…