ಸುದ್ದಿ

ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

55

ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ ಎಸಗಿದ್ದನ್ನು ಪರಿಗಣಿಸಿ ಪಾಕಿಸ್ತಾನವನ್ನು ಸಂಪೂರ್ಣವಾಗಿ ದೂಷಣೆ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ನಾನು ನಂಬಿಕೆಯನ್ನು ಇಟ್ಟಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಪುಲ್ವಾಮಾ ದಾಳಿ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಈ ರೀತಿಯ ದಾಳಿ ನಡೆಯುತ್ತಲೇ ಇರುತ್ತದೆ. ಮುಂಬೈ ದಾಳಿಯಾದಾಗ ನಾವು ವಿಮಾನವನ್ನು ಪಾಕಿಸ್ತಾನಕ್ಕೆ ಕಳುಹಿಸಬಹುದಿತ್ತು. ಆದರೆ ನನ್ನ ಪ್ರಕಾರ ಇದು ಸರಿಯಾದ ನಿರ್ಧಾರ ಅಲ್ಲ ಎಂದು ಹೇಳಿದರು.

ಸುದ್ದಿ ಸಂಸ್ಥೆಯೊಂದಿಗೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಪಿತ್ರೋಡ, ನಿಜಕ್ಕೂ ದಾಳಿ ನಡೆಯಿತಾ? ನಿಜಕ್ಕೂ 300 ಜನರನ್ನು ಕೊಲ್ಲಲಾಯಿತಾ? ನನಗೆ ಗೊತ್ತಿಲ್ಲ. ಒಬ್ಬ ಪ್ರಜೆಯಾಗಿ ಇದನ್ನು ಕೇಳುವುದು ನನ್ನ ಕರ್ತವ್ಯ. ವಿದೇಶಿ ಮಾಧ್ಯಮಗಳು ಈ ಏರ್​​ಸ್ಟ್ರೈಕ್​ ಬಗ್ಗೆ ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಿವೆ ಎಂದು ಹೇಳಿದ್ರು.

ನಾನು ಗಾಂಧಿವಾದಿ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ನಂಬಿರುವವನು ಎಂದು ಹೇಳಿದ್ರು. ಹಾಗಿದ್ರೆ ಪಾಕಿಸ್ತಾನದೊಂದಿಗೆ ಮಾತುಕತೆ ಮಾಡಿ ಪರಿಹಾರ ಕಂಡುಕೊಳ್ಳಬೇಕಾ ಎಂದು ಮತ್ತೆ ಪ್ರಶ್ನಿಸಿದಾಗ, ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ದೇಶವನ್ನು ದೂಷಿಸುವುದು ತಿಳಿಗೇಡಿತನ ಎಂದರು. ನನಗೆ ಪುಲ್ವಾಮಾ ದಾಳಿ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಇದು ಯಾವಾಗಲೂ ನಡೆಯುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಮತ್ತಷ್ಟು ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ಪರವಾಗಿ ಹೇಳಿಕೆ ನೀಡುತ್ತಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ನಾನು ಒಬ್ಬ ವಿಜ್ಞಾನಿ. ನಾನು ಡೇಟಾಗಳನ್ನು ನಂಬುತ್ತೇನೆ ಹೊರತು ಭಾವನೆಗಳನ್ನು ನಂಬುವುದಿಲ್ಲ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ಶ್ರೀ ಚಾಮುಂಡೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…