ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…