ಆರೋಗ್ಯ

ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

1006

ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.

ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.

ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.

ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.

ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.

ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-

ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.

ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-

ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.

ಧೂಮಪಾನ ತ್ಯಜಿಸಲು ಸಹಕಾರಿ:-

ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.

ಚರ್ಮದ ರಕ್ಷಣೆ:-

ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.

ರಕ್ತ ಶುದ್ಧೀಕರಿಸುತ್ತದೆ:-

ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.

ಕೂದಲಿಗೆ ಅತ್ಯುತ್ತಮ:-

ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.