ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.
ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.
ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.
ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.
ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.
ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-
ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.
ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-
ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.
ಧೂಮಪಾನ ತ್ಯಜಿಸಲು ಸಹಕಾರಿ:-
ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.
ಚರ್ಮದ ರಕ್ಷಣೆ:-
ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.
ರಕ್ತ ಶುದ್ಧೀಕರಿಸುತ್ತದೆ:-
ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.
ಕೂದಲಿಗೆ ಅತ್ಯುತ್ತಮ:-
ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…