ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….