ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.