ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1920

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…