ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1920

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…