ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1916

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.