ಹಣ ಕಾಸು

“ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

4226

ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ  ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-

ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.

ಯಾರೂ ಅರ್ಹರು?                                                                                                                                                                                  ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.

 ಮೂಲ

ಯೋಜನೆಯಿಂದ ಪಡೆಯುವ ಸಬ್ಸಿಡಿ:-                                                                                                                                                                    ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.

ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು?                                                                                                                                                ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.

 ಮೂಲ

ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.

ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ                                                                                                                                                            ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಗ್ಯಾಜೆಟ್

    ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

    ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.