ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…