News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಉಪಯುಕ್ತ ಮಾಹಿತಿ

ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

434

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು.

2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ.

3.ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಕರ್ನಾಟಕ, ಸಿನಿಮಾ

    ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

    ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…