ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್ವುಳ್ಳ ಬಟ್ಟೆ ಸಿಗಬಹುದು.
2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್ಗಳ ಜೀನ್ಸ್ ಮತ್ತು ಟಾಪ್ಗಳ ಸೈಜ್ನಲ್ಲಿ ವ್ಯತ್ಯಾಸವಿರುತ್ತದೆ.
3.ಒಂದೇ ಡಿಸೈನ್ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್ಗಳು ಇರುವಾಗ ಒಂದೇ ಡಿಸೈನ್ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…