ದೇವರು-ಧರ್ಮ

ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

955

ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್‌ ರೂಪಾಯಿಗಳು.

 

  •  ತಿರುಪತಿ ತಿಮ್ಮಪ್ಪನ ದೇವಾಲಯ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ .  ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್‌ ಓವರ್‌ಸಿಸ್‌‌ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

  • ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯ

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ.  ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

  • ವೈಷ್ಣೋ ದೇವಿ ದೇವಾಲಯ

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.

ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ  ಒಟ್ಟು ಚಿನ್ನ ಎಂದರೆ 20,000 ಟನ್‌ ಎಂದು ಅಂದಾಜಿಸಲಾಗಿದೆ.

  • ಅನಂತ ಪದ್ಮನಾಭ ಸ್ವಾಮಿ ದೇವಾಲಯ

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್‌ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

 

  • ಗುರುವಾಯೂರಿನಲ್ಲಿರುವ ಶ್ರೀ ಕೃಷ್ಣನ ದೇವಾಲಯ.

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.

ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

  • ಸಿದ್ದಿ ವಿನಾಯಕ ದೇವಾಲಯ ಮುಂಬೈ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…