ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…