ಜ್ಯೋತಿಷ್ಯ

ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

38

75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ.

ಪ್ರೀತಿ ಶುರುವಾಗಿದ್ದು ಹೇಗೆ?
1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ ಶುರುವಾಗಿದೆ. 24 ವರ್ಷದಲ್ಲಿದ್ದಾಗ ಕೇಟಿ ರಾಬಿನ್ಸ್, ಜೇನಿನ್‍ನನ್ನು ಭೇಟಿ ಮಾಡಿದ್ದರು. ಮೊದಲ ಭೇಟಿಯಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದರು. ರಾಬಿನ್ಸ್ ಅಮೆರಿಕದಲ್ಲಿ ವಾಸಿಸುತ್ತಿದ್ದರೆ, ಜೇನಿನ್ ಫ್ರಾನ್ಸ್ ನಲ್ಲಿ ವಾಸಿಸುತ್ತಿದ್ದರು. ರಾಬಿನ್ಸ್ ಅಮೆರಿಕದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ಸಂದರ್ಭದಲ್ಲಿ 2ನೇ ವಿಶ್ವ ಯುದ್ಧ ನಡೆಯುತ್ತಿದ್ದ ಕಾರಣ ಬೇರೆ ಕಡೆ ಕಳುಹಿಸಲಾಗಿತ್ತು. ಯುದ್ಧ ಮುಗಿದ ನಂತರ ಎಲ್ಲ ಸೈನಿಕರು ತಮ್ಮ ತಮ್ಮ ಮನೆಗೆ ಹಿಂದಿರುಗಿದ್ದರು. ಹಾಗೆಯೇ ರಾಬಿನ್ಸ್ ಕೂಡ ತಮ್ಮ ಮನೆಗೆ ಹಿಂದಿರುಗಿದ್ದರು.
ಹಿಂತಿರುಗಲಿಲ್ಲ ರಾಬಿನ್ಸ್:

ರಾಬಿನ್ಸ್ ನನ್ನನ್ನು ಬಿಟ್ಟು ಹೋಗಿದ್ದ ಸಂದರ್ಭದಲ್ಲಿ ನಾನು ತುಂಬಾ ಅತ್ತಿದ್ದೆ. ರಾಬಿನ್ಸ್ ಮತ್ತೆ ವಾಪಸ್ ಬರುತ್ತಾರೆ ಎಂಬ ಭರವಸೆಯಿಂದ ನಾನು ಆಂಗ್ಲ ಭಾಷೆ ಕೂಡ ಕಲಿತೆ. ಅವರು ಮತ್ತೆ ಬಂದಾಗ ನಾನು ಅವರ ಜೊತೆ ಆಂಗ್ಲ ಭಾಷೆ ಮಾತನಾಡಬೇಕು ಎಂದು ಆಸೆಯಿಂದ ಇದ್ದೆ. ಆದರೆ ಯುದ್ಧ ನಡೆದ ಬಳಿಕ ರಾಬಿನ್ಸ್ ಅಮೆರಿಕಗೆ ಹೊರಟೇ ಹೋದರು ಎಂದು ಜೇನಿನ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಹಿಂತಿರುಗಲಿಲ್ಲ ರಾಬಿನ್ಸ್:
ನಾನು ಕೂಡ ಜೇನಿನ್‍ನನ್ನು ಮರೆಯಲಿಲ್ಲ. ನಾನು ಈಗಲೂ ಸಹ ಜೇನಿನ್ ಫೋಟೋ ಇಟ್ಟುಕೊಂಡಿದ್ದೇನೆ. ನಾನು ಮತ್ತೆ ಹಿಂದಿರುಗಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಆ ಸಂದರ್ಭದಲ್ಲಿ ಹೇಳಿದ್ದೆ. ಆದರೆ ಆಗ ಅದು ಸಾಧ್ಯವಾಗಿಲ್ಲ ಎಂದು ರಾಬಿನ್ಸ್ ಹೇಳಿದ್ದಾರೆ. ಅಲ್ಲದೆ ಜೇನಿನ್ ಕೂಡ ನಾನು ರಾಬಿನ್ಸ್ ನನ್ನು ತುಂಬಾ ಪ್ರೀತಿಸುತ್ತೇನೆ. ನಾನು ಅವರನ್ನು ಎಂದಿಗೂ ಹೃದಯದಿಂದ ತೆಗೆಯಲಿಲ್ಲ ಎಂದು ಹೇಳಿದ್ದಾರೆ. ರಾಬಿನ್ಸ್ ಟ್ರಕ್‍ನಲ್ಲಿ ಯುದ್ಧಕ್ಕೆ ಹೊರಟಾಗ ನನಗೆ ತುಂಬಾ ದುಃಖ ಆಗಿತ್ತು. ನಾನು ತುಂಬಾ ಅತ್ತಿದ್ದೆ. ಯುದ್ಧ ನಡೆದ ಬಳಿಕ ಅವರು ಅಮೆರಿಕಗೆ ಹೋಗಬಾರದಿತ್ತು ಎಂದು ಜೇನಿನ್ ಹೇಳಿದ್ದಾರೆ.

ಸ್ವಲ್ಪ ವರ್ಷದ ಬಳಿಕ ಇಬ್ಬರು ಬೇರೆಯವರನ್ನು ಮದುವೆಯಾಗಿದ್ದು, ಈಗ ಇಬ್ಬರ ಸಂಗಾತಿ ಕೂಡ ನಿಧನರಾಗಿದ್ದಾರೆ. 75 ವರ್ಷಗಳ ಬಳಿಕ ಇಬ್ಬರು ಪರಸ್ಪರ ಭೇಟಿಯಾಗಿ ಭಾವುಕರಾಗಿದ್ದಾರೆ. ಅಲ್ಲದೆ ಇಬ್ಬರು ಕಿಸ್ ಮಾಡಿ ಕೆಲ ಹೊತ್ತು ಕಾಲ ಕಳೆದಿದ್ದಾರೆ. ಬಳಿಕ ರಾಬಿನ್ಸ್ ನಾನು ಈಗ ಹೋಗಬೇಕು. ನಾನು ಮತ್ತೆ ಹಿಂದಿರುಗುತ್ತೇನೆ ಎಂದು ನಿನಗೆ ಮಾತು ನೀಡುತ್ತೇನೆ ಎಂದು ಹೇಳುತ್ತಾ ಜೇನಿನ್‍ಗೆ ಐ ಲವ್ ಯೂ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.