News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

879

ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7  ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.

ಹಾಲಿವುಡ್ ನ “ದಿ ರೈಸನ್” ಚಿತ್ರಕ್ಕೆ ಸುದೀಪ್ ಸಹಿ:-

ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್  ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ  ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…

ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.

ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.

ಹಾಲಿವುಡ್‌ ಡೈರೆಕ್ಟರ್‌ ಎಡಿ ಆರ್ಯ ನಿರ್ದೇಶನದ ‘ರೈಸನ್‌’ ಚಿತ್ರದಲ್ಲಿ ಸುದೀಪ್‌ ನಾಯಕರಾಗಿ ಮೊದಲಿಗೆ ಹಾಲಿವುಡ್‌ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್‌ ಥ್ರಿಲ್ಲರ್‌ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್‌ಗೆ ಇಬ್ಬರುನಾಯಕಿಯರು. ವಿದೇಶಿ  ಹುಡುಗಿಯ ಪಾತ್ರದಲ್ಲಿ ನಿಕೋಲ್‌ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್‌ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….