ಆರೋಗ್ಯ

ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

1161

ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.

ಬೊಜ್ಜು :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , ೫೦೦೦ ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-

ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-

ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-

ಬಿ-೬, ಬಿ-೧೨ ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡ:-

ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, ೪ ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ಖಿನ್ನತೆ :-

‘ಮೈಂಡ್ ಸಂಸ್ಥೆ,,’ ಇತ್ತೀಚೆಗೆ ನಡೆಸಿದ, ಸರ್ವೇಕ್ಷಣೆಯ ಪ್ರಕಾರ, ಖಿನ್ನತೆಗೆ ಒಳಗಾದವರು ಒಂದು ಬಾಳೆಹಣ್ಣನು ಸೇವಿಸಿದ ಬಳಿಕ, ಹೆಚ್ಚಿನವರಲ್ಲಿ ಸುಧಾರಣೆ ಕಂಡುಬಂದಿದೆ. ಟ್ರಿಪ್ಟೋಪ್ಯಾನ್ ಎಂಬ ಪ್ರೋಟೀನ್ ಇದಕ್ಕೆ ಕಾರಣ. ನಮ್ಮ ದೇಹ ಈ ಪ್ರೋಟೀನ್ ನನ್ನು ಸೆರೋಟಿನ್ ಆಗಿ ಪರಿವರ್ತಿಸುತ್ತದೆ. ಇದರಿಂದ ಉದ್ವೇಗಶಮನಗೊಂಡು ಪ್ರಪುಲ್ಲಚಿತ್ತರನ್ನಾಗಿಸುವ ಅಂಶವೆಂದು ಪರಿಗಣಿತವಾಗಿದೆ. ಕಾಡುವ ನಮ್ಮೆಲ್ಲರ ಖಿನ್ನತೆಗೆ ಮಾತ್ರೆಗಳ ಮೊರೆಹೋಗುವಬದಲು, ದಿನಕ್ಕೊಂದು ಬಾಳಿಹಣ್ಣಿನ ಸೇವನೆಯಿಂದ ಉಪಶಮನಪಡೆಯಬಹುದು. ಬಾಳೆಹಣ್ಣಿನಲ್ಲಿರುವ ಬಿ-೬ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಸಮಸ್ಥಿತಿಯಲ್ಲಿರಿಸಿ, ನಮ್ಮ ಮನಸ್ಥಿತಿಯ ಮೇಲೆ ಪರಿಣಾಮವನ್ನುಂಟುಮಾಡುತ್ತದೆ.

ರಕ್ತಹೀನತೆ :-

ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-

ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.