News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

312

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…