ಸಿನಿಮಾ

ಬಾಹುಬಲಿ-2 ದಾಖಲೆಗಳು ಉಡೀಸ್ !!!

314

ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು. ಇದೀಗ ‘ಬಾಹುಬಲಿ 2’ ಚಿತ್ರದ ಎಲ್ಲ ದಾಖಲೆಗಳನ್ನು ಮತ್ತೊಂದು ಸೌತ್‌ ಇಂಡಿಯನ್‌ ಚಿತ್ರ ಮುರಿಯಲಿದೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಸದ್ಯಕ್ಕೆ ಪ್ರಭಾಸ್‌ ಅಭಿನಯದ ‘ಬಾಹುಬಲಿ 2’ ಚಿತ್ರ ಜಗತ್ತಿನಾದ್ಯಂತ 1700 ಕೋಟಿ ಕಲೆಕ್ಷನ್‌ ಸನಿಹಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ ಈ ಚಿತ್ರದ ಹಿಂದಿ ಅವತರಣಿಕೆಯೇ 500 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಹೊಸ ದಾಖಲೆ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲಾಗಿ ನಿಂತಿರುವ ‘ಬಾಹುಬಲಿ’ ಚಿತ್ರದ ದಾಖಲೆಗಳನ್ನು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ 2.0 ಚಿತ್ರ ಅಳಿಸಿಹಾಕಲಿದೆಯಂತೆ.

ಹೌದು, ಕೆಲ ಸಿನಿ ಪಂಡಿತರು ಈಗಾಗಲೇ 2.0 ಚಿತ್ರದ ಸಕ್ಸಸ್‌ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಅವರ ಲೆಕ್ಕಾಚಾರದ ಪ್ರಕಾರ ಶಂಕರ್‌ ನಿರ್ದೇಶನದ 2.0 ಚಿತ್ರ ದೇಶಾದ್ಯಂತ ಒಟ್ಟು 7000 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಇದಷ್ಟೇ ಅಲ್ಲದೆ 15 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿರುವುದು ಮತ್ತೊಂದು ವಿಶೇಷ.

ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾದ ‘ಬಾಹುಬಲಿ 2’ ಚಿತ್ರ ದೇಶಾದ್ಯಂತ 6500 ಚಿತ್ರಮಂದಿರಗಳಲ್ಲಿ ತೆರೆ ಕಂಡು, 5 ಭಾಷೆಗಳಲ್ಲಿ ಡಬ್‌ ಆಗಿ ಪ್ರೇಕ್ಷಕರನ್ನು ರಂಜಿಸಿದೆ. ಭಾಷೆ ಹಾಗೂ ಚಿತ್ರಮಂದಿರಗಳ ಲೆಕ್ಕಾಚಾರದಲ್ಲಿ ಹೊಸ ದಾಖಲೆ ಬರೆಯಲು ಅಣಿಯಗಿರುವ 2.0 ಚಿತ್ರ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಲ್ಲಿ ಓದಿ :-ಕನ್ನಡಕ್ಕೆ ಬಾಹುಬಲಿಯ ಬಲ್ಲಾಳದೇವ !!!

ಬಹುಕೋಟಿ ವೆಚ್ಚದ ‘2.0’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನಿಮಗೆಲ್ಲ ಗೊತ್ತೇ ಇದೆ. ಸದ್ಯಕ್ಕೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ 26ರಂದು ತೆರೆಗೆ ಬರುವ ನಿರೀಕ್ಷೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…