ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.
ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.
ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್ಲೈಟ್ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್ಸೆಂಟರ್ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.
ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.
ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.
ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…