News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

72

ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ 500ರೂ.ಗೆ ಹೆಚ್ಚಿಸಲಾಗಿದೆ. ಪರವಾನಗಿ ಇಲ್ಲದೆ ಅನಧಿಕೃತ ವಾಹನಗಳಿಗೆ 1000 ದಿಂದ 5000ರೂ. ವರೆಗೆ ಪರಿಷ್ಕರಿಸಲಾಗಿದೆ.

ಚಾಲನಾ ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣವನ್ನು 500 ರಿಂದ 5000ರೂ.ಗೆ ಹೆಚ್ಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 2000 ದಿಂದ 10,000ರೂ.ಗೆ ಹೆಚ್ಚಿಸಲಾಗಿದೆ. ಅತೀ ವೇಗದ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 400 ರಿಂದ 1000ರೂ.ಗೆ ಪರಿಷ್ಕರಿಸಲಾಗಿದೆ. ಪರವಾನಗಿ ಇಲ್ಲದ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 5000 ದಿಂದ 10,000ಕ್ಕೆ ಹೆಚ್ಚಿಸಲಾಗಿದ್ದು, ಅರ್ಹತೆ ಇಲ್ಲದವರು ವಾಹನ ಚಾಲನೆ ಮಾಡಿದರೆ ವಿಧಿಸಲಾಗುತ್ತಿದ್ದ ದಂಡವನ್ನು 500 ರಿಂದ 10,000ರೂ.ಗೆ ಹೆಚ್ಚಳ ಮಾಡಲಾಗಿದೆ.

ಸೀಟ್‍ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣ 100 ರಿಂದ 1000ರೂ.ಗೆ ಹೆಚ್ಚಿಸಲಾಗಿದೆ. ಆ್ಯಂಬುಲೆನ್ಸ್‍ನಂತಹ ತುರ್ತು ವಾಹನಗಳಿಗೆ ಅವಕಾಶ ಮಾಡಿಕೊಡದಿದ್ದರೆ 10,000ರೂ., ಟಿಕೆಟ್ ರಹಿತ ಪ್ರಯಾಣಕ್ಕೆ 500ರೂ. ದಂಡ ವಿಧಿಸಲಾಗಿದೆ. ವಿಮೆ ಇಲ್ಲದೆ ಚಾಲನೆ ಮಾಡುವ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 2000ರೂ.ಗೆ ಹಾಗೂ ಅಪಾಯಕಾರಿ ವಾಹನ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 5000ರೂ.ಗೆ ಹೆಚ್ಚಿಸಲಾಗಿದೆ.

ಅತಿ ಭಾರದ ಸರಕು ಸಾಗಣೆ ಮಾಡಿದರೆ 20,000ರೂ.ವರೆಗೂ ದಂಡ ವಿಧಿಸುವುದಲ್ಲದೆ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳಿಗೆ ಪ್ರತೀ ಪ್ರಯಾಣಿಕರಿಗೆ 1000ರೂ., ಹಾಗೆಯೇ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿದರೆ 1000 ದಿಂದ 5000ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತರು ವಾಹನ ಚಾಲನೆ ಮಾಡಿ ಎಸಗುವ ಅಪರಾಧಕ್ಕೆ 25,000ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…