ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…