ಕಾನೂನು

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

9051

ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೊಂದಾಯಿತ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ವ್ಯವಸ್ಥೆ ಇತ್ತು. ಈ ಅನಿವಾರ್ಯತೆಯ ಕಾರಣಕ್ಕಾಗಿ ನ್ಯಾಯಬೆಲೆ ಅಂಗಡಿಯವರು ಫಲಾನುಭವಿಗಳ ಜೊತೆ ಒರಟಾಗಿ ಮಾತನಾಡುತ್ತಿದ್ದರು.

ಇನ್ನು ಮುಂದೆ ಈ ರೀತಿಯ ಮುಜುಗರ ತಪ್ಪಲಿದೆ. ರಾಜ್ಯದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯಾಗಿ ಆಧಾರ್ ಸಂಖ್ಯೆಯನ್ನು ಸಂಪರ್ಕಿಸಿದ್ದರೆ ಸಾಕು. ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ಬಿಪಿಎಲ್ ಚೀಟಿದಾರರು ಪಡಿತರ ಪಡೆದುಕೊಳ್ಳಬಹುದು ಎಂದರು. ಇನ್ನು ಮುಂದೆ ಪಡಿತರಚೀಟಿ ಪಡೆಯಲು ಆಧಾರ್ ಸಂಖ್ಯೆ ಇದ್ದರೆ ಸಾಕು, ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್ ಕಾರ್ಡ್‍ಗಾಗಿ ಇದುವರೆಗೂ 9.05 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ 4.05 ಲಕ್ಷ ಕಾರ್ಡ್‍ಗಳು ಮುದ್ರಣಗೊಂಡಿವೆ. ಪ್ರತಿದಿನ 40 ಸಾವಿರ ಕಾರ್ಡ್‍ಗಳು ಮುದ್ರಣಗೊಳ್ಳುತ್ತಿವೆ. ಇನ್ನು ಕೆಲವು ಕಾರ್ಡ್‍ನ ಮಾಹಿತಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಜನಸ್ನೇಹಿ ಕೇಂದ್ರಗಳಲ್ಲಿ ಉಳಿದಿದ್ದು, ಸುಮಾರು 5 ಲಕ್ಷ ಕಾರ್ಡ್‍ಗಳ ವಿತರಣೆ ಬಾಕಿ ಇದೆ. ಮಾಹಿತಿ ಸಂಪೂರ್ಣ ಲಭ್ಯವಾದರೆ 10 ದಿನದೊಳಗಾಗಿ ಫಲಾನುಭವಿಗಳ ಮನೆಗೆ ಕಾರ್ಡ್‍ಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು , ಶಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗೆ ಶಾಸಕರು ವಾರದೊಳಗಾಗಿ ಫಲಾನುಭವಿಗಳ ಪಟ್ಟಿ ಕೊಡಬೇಕು.

ಸರ್ಕಾರ ಜಿಲ್ಲಾವಾರು ಕೋಟಾವನ್ನು ನಿಗದಿಮಾಡಿದ್ದು ಮೊದಲ ಹಂತದಲ್ಲಿ 10 ಲಕ್ಷ ಮಂದಿಗೆ ಅನಿಲ ಭಾಗ್ಯ ಯೋಜನೆಯಡಿ ಉಚಿತ ಸಂಪರ್ಕ, ಎರಡು ರಿಫೀಲಿಂಗ್ ಸಿಲಿಂಡ್, ಗ್ಯಾಸ್ ಸ್ಟವ್ ನೀಡಲಾಗುವುದು. 2ನೇ ಹಂತದಲ್ಲಿ 10 ಲಕ್ಷ ಫಲಾನುಭವಿಗಳಿಗೆ ಅನಿಲಭಾಗ್ಯ ಸಂಪರ್ಕ ನೀಡಲಾಗುತ್ತದೆ ಎಂದು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…