ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…