ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ.
ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ ಬಿರು ಬಸಿಲಿನ ಬೇಗೆ ತಟ್ಟತೊಡಗಿದೆ.
ಬೆಂಗಳೂರೇ ಹೀಗಾದರೆ ಇನ್ನು ಉತ್ತರ ಕನ್ನಡ, ಗಡಿ ನಾಡುಗಳ ಪರಿಸ್ಥಿತಿ ಹೇಳಲೂ ಆಗದ ಹಾಗಿದೆ. 10 ರಿಂದ 4 ಗಂಟೆಯವರೆಗೆ ಹೊರಗೆ ಬರಲಾಗದ ಸ್ಥಿತಿ ಈ ಊರುಗಳಲ್ಲಿದೆ. ಹಣ್ಣು ಹಾಗೂ ತಂಪು ಪಾನೀಯಗಳ ಮಾರಾಟ ಬಲು ಭರಾಟೆಯಿಂದ ಸಾಗಿದೆ.
ತಾಯಂದಿರ ಕಷ್ಟ ಹೇಳಲಿಕ್ಕಾಗದಷ್ಟಿದೆ. ಮಕ್ಕಳಿಗೆ ಪರೀಕ್ಷೆ ಮುಗಿದು ಬೇಸಿಗೆ ರಜಾ ಶುರುವಾಗಿದೆ. ಇನ್ನು ಪುಟ್ಟ ಕಂದಮ್ಮಗಳ ಗೋಳಂತೂ ಹೇಳಲಾಗದು. ಅಳು ಒಂದೇ ಗೋಳಾಗಿದೆ. ಇವೆಲ್ಲದರ ನಡುವೆ ಕರೆಂಟ್ ಹೋದರಂತೂ ಒಂದು ಕ್ಷಣ ಕೂಡ ಇರಲಿಕ್ಕೆ ಆಗಿಲ್ಲ.
ಇದು ಮಕ್ಕಳ ಕತೆಯಾದರೆ ವಯಸ್ಸಾದವರ ಕಷ್ಟ ಮತ್ತೊಂದು ಥರ. ಮಲಗಲೂ ಆಗದೆ, ಕೂರಲೂ ಆಗದ ಅವರ ಪರಿಸ್ಥಿತಿ ಹೇಳತೀರದು. ಮಾರ್ಚ್ ನಲ್ಲೇ ಈ ಗತಿಯಾದರೆ ಇನ್ನೂ ಮೇ ಜೂನ್ ನಲ್ಲಿ ಏನಾಗಬಹುದು ಹೇಳಿ.
ನಾವೆಲ್ಲರೂ ಇದಕ್ಕೆ ಪರಿಹಾರ ಏನೂ ಮಾಡದೇ ಬಿಸಿಲು, ಬೇಸಿಗೆ ಅಂತ ನಾವು ನಮ್ಮ ಕೆಲಸ ಮಾಡುತ್ತ ಸುಮ್ಮನೆ ಕುಳಿತುಕೊಳ್ಳುವುದು ಬಿಟ್ಟು ಮನೆಯಲ್ಲಿರೊ ಎಲ್ಲ ಸದಸ್ಯರಿಗೂ ಒಬ್ಬರಿಗೆ ಒಂದರಂತೆ ಗಿಡಗಳನ್ನು ನೆಟ್ಟು ಬೆಳೆಸಿ. ಮನೆ ಕಟ್ಟುವವರೆಲ್ಲರೂ ಮಳೆ ಕೋಯ್ಲ ಮಾಡಿ, ಊರಿನ ಸುತ್ತ ಮಳೆ ನೀರಿನ ಹೋರಟ ನಿರ್ಮಿಸಿ, ನಮ್ಮ ಕರ್ತವ್ಯ ಮಾಡಿದರೆ ಈ ಬಿಸಿ ಬಿಸಿ ಬೇಸಿಗೆಯಿಂದ ಸ್ವಲ್ಪವಾದರೂ ತಪ್ಪಿಸಿಕೊಳ್ಳಬಹುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…